ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

ಉಡುಪಿ : ಉಚ್ಚಿಲ ದಸರಾ ಶೋಭಾಯಾತ್ರೆ ಹಿನ್ನಲೆ : ಅ.2 ರಂದು ಘನ ವಾಹನ ಸಂಚಾರದ ಮಾರ್ಗ ಬದಲಾವಣೆ….!!

ಉಡುಪಿ : ಉಚ್ಚಿಲ ದಸರಾ ಶೋಭಾಯಾತ್ರೆ ಹಿನ್ನಲೆ : ಅ.2 ರಂದು ಘನ ವಾಹನ ಸಂಚಾರದ ಮಾರ್ಗ ಬದಲಾವಣೆ….!!

ಉಡುಪಿ: ಉಚ್ಚಿಲ ದಸರಾ -2025 ರ ಪ್ರಯುಕ್ತ ಅಕ್ಟೋಬರ್.2 ರಂದು ಬೃಹತ್ ಶೋಭಾಯತ್ರೆ ಮೆರವಣಿಗೆಯು ರಾಷ್ಟ್ರೀಯ ಹೆದ್ದಾರಿ -66 ರಲ್ಲಿ ಸಾಗಲಿರುವುದರಿಂದ ವಾಹನ ದಟ್ಟಣೆ ಉಂಟಾಗಿ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ. ಆದ್ದರಿಂದ ಅಂದು ಉಡುಪಿ-ಮಂಗಳೂರು ಮಾರ್ಗವಾಗಿ ಬರುವ ಘನ ವಾಹನಗಳು ಸಂಜೆ 5 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಬದಲಿ ಮಾರ್ಗವಾಗಿ ಕಟಪಾಡಿ-ಶಿರ್ವ-ಬೆಳ್ಮಣ್-ಪಡುಬಿದ್ರಿ ಮಾರ್ಗವಾಗಿ ಸಂಚರಿಸುವಂತೆ ವಿನಂತಿಸಲಾಗಿದೆ.
ಉಡುಪಿ ಕಡೆಯಿಂದ ಬಜ್ಪೆ ಏರ್‌ಪೋರ್ಟ್ ಹೋಗುವ ವಾಹನಗಳು ಕಟಪಾಡಿ-ಶಿರ್ವ-ಬೆಳ್ಮಣ್-ಮುಂಡ್ಕೂರು ಮಾರ್ಗವಾಗಿ ಸಂಚರಿಸುವುದು. ಟ್ರಕ್, ಲಾರಿ, ಟ್ಯಾಂಕರ್ ಮುಂತಾದ ಘನ ವಾಹನಗಳನ್ನು ರಾತ್ರಿ 9 ಗಂಟೆಯವರೆಗೆ ಕುಂದಾಪುರ, ಉಡುಪಿ ಕಡೆಗಳಲ್ಲಿ ಟ್ರಕ್‌ಬೇಯಲ್ಲಿ ನಿಲ್ಲಿಸಿ ನಂತರ ಸಂಚಾರ ಮುಂದುವರಿಸಲಾಗುವುದು. ಉಡುಪಿ ಯಿಂದ ಮಂಗಳೂರು ಮಾರ್ಗವಾಗಿ ಬೆಂಗಳೂರು ಸಂಚರಿಸುವ ರಾತ್ರಿ ಪ್ರಯಾಣಿಕ ಬಸ್ಸುಗಳು ರಾತ್ರಿ 9:00 ಗಂಟೆ ನಂತರ ಉಡುಪಿಯಿಂದ ಸಂಚರಿಸಬಹುದಾಗಿದೆ. ಮಂಗಳೂರು-ಉಡುಪಿ ಮಾರ್ಗವಾಗಿ ಸಾಗುವ ಘನ ವಾಹನಗಳು ಸಂಜೆ 5:00 ರಿಂದ ರಾತ್ರಿ 10:00 ಗಂಟೆ ಮಧ್ಯೆ ಸಂಚರಿಸದೆ ದಸರಾ ಶೋಭಾಯಾತ್ರೆ ಸಾಗಲು ಸಹಕರಿಸಬೇಕೆಂದು ಈ ಮೂಲಕ ವಿನಂತಿಸಲಾಗಿದೆ.

Ads on article

Advertise in articles 1

advertising articles 2

Advertise under the article