ಉಡುಪಿ ಜಿಲ್ಲಾಧಿಕಾರಿಯವರಿಂದ ಸಾರ್ವಜನಿಕ ಪ್ರಕಟಣೆ :ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಬಿಟ್ಟು ಹೋದಲ್ಲಿ ಸಹಾಯವಾಣಿಗೆ ಕರೆ ಮಾಡಿ
Thursday, October 9, 2025
ಉಡುಪಿ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆ.22 ರಂದು ಪ್ರಾರಂಭಿಸಿದ್ದು ಸಮೀಕ್ಷೆ ಕಾರ್ಯವು ಪೂರ್ಣಗೊಳ್ಳದ ಕಾರಣ ಸರ್ಕಾರದ ಆದೇಶದಂತೆ ಅ.18 ರವರೆಗೆ ಸಮೀಕ್ಷೆ ಕಾರ್ಯವನ್ನು ಮುಂದೂಡಲಾಗಿದೆ.
ಈ ಸಮೀಕ್ಷೆ ಸಮಯದಲ್ಲಿ ಸಮೀಕ್ಷೆದಾರರು ತಮ್ಮ ವ್ಯಾಪ್ತಿಯ ಮನೆಗಳಿಗೆ ಭೇಟಿ ನೀಡದೆ ಬಿಟ್ಟು ಹೋದಲ್ಲಿ ರಾಜ್ಯ ಮಟ್ಟದ ಸಹಾಯವಾಣಿ 8050770004, ಜಿಲ್ಲಾ ಮಟ್ಟದ ಸಹಾಯವಾಣಿ 0820-2574881, ಉಡುಪಿ/ಬ್ರಹ್ಮಾವರ/ ಕಾಪು ಮಟ್ಟದ ಸಹಾಯವಾಣಿ 0820-2520739, ಬೈಂದೂರು/ಕುಂದಾಪುರ 9972294198, -ಕಾರ್ಕಳ ಹೆಬ್ರಿ 08258-298610 ಸಹಾಯವಾಣಿಗೆ ಕಚೇರಿ ಅವಧಿಯಲ್ಲಿ ಕರೆ ಮಾಡಿದಲ್ಲಿ ಸಮೀಕ್ಷೆದಾರರನ್ನು ಮನೆಗೆ ಕಳುಹಿಸಿ ಸಮೀಕ್ಷೆ ಕಾರ್ಯ ನಡೆಸಲಾಗುವುದು. ಕುಟುಂಬದ ಸದಸ್ಯರು