A ಬಾಗಲಕೋಟೆ| ಟ್ರ್ಯಾಕ್ಟರ್ - ಕಾರು ಡಿಕ್ಕಿ: ನಾಲ್ವರು ಯುವಕರ ದುರ್ಮರಣ
Thursday, December 4, 2025
ಬಾಗಲಕೋಟೆ: ತಾಲ್ಲೂಕಿನ ಸಿದ್ದಾಪುರ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಹತ್ತಿರ ರಾತ್ರಿ 12.30ಕ್ಕೆ ಕಬ್ಬಿನ ಟ್ರ್ಯಾಕ್ಟರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಯುವಕರು ಮೃತಪಟ್ಟಿದ್ದಾರೆ.
ಮೃತರನ್ನು ಸಿದ್ದಾಪುರ ಗ್ರಾಮದ ವಿಶ್ವನಾಥ ಕುಂಬಾರ(17), ಪ್ರವೀಣ ಶೇಡಬಾಳ(22), ಗಣೇಶ ಅಳ್ಳಿಮಟ್ಟಿ( 20), ಪ್ರಜ್ವಲ್ ಶೇಡಬಾಳ(17) ಎಂದು ಗುರುತಿಸಲಾಗಿದೆ.
ಸಿದ್ದಾಪುರ ಗ್ರಾಮದಿಂದ ಸ್ನೇಹಿತರು ಸೇರಿಕೊಂಡು ತಡರಾತ್ರಿ ಶಿರೋಳ ಕಾಡಸಿದ್ದೇಶ್ವರ ದೇವರ ಜಾತ್ರೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ.
ಕಬ್ಬು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ಗೆ ಕಾರು ರಭಸವಾಗಿ ಹಿಂದಿನಿಂದ ಡಿಕ್ಕಿ ಹೊಡೆದಿದೆ.
ಜಮಖಂಡಿ ಗ್ರಾಮೀಣ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.