Bhopal : ರಾಜ್ಯಪಾಲರ ಮೊಮ್ಮಗನ ವಿರುದ್ಧ ವರದಕ್ಷಿಣೆ ಕಿರುಕುಳ,ಹಲ್ಲೆ ಆರೋಪ: ಪ್ರಕರಣ ದಾಖಲು*
Thursday, December 4, 2025
ದಿವ್ಯಾ ಅವರು ತಮ್ಮ ದೂರಿನಲ್ಲಿ ತಿಳಿಸಿರುವಂತೆ, ೨೦೧೮ರಲ್ಲಿ ನಡೆದ ವಿವಾಹದ ನಂತರವೇ ದೇವೇಂದ್ರ ಹಾಗೂ ಅವರ ಕುಟುಂಬಸ್ಥರು ವರದಕ್ಷಿಣೆಗಾಗಿ ನಿರಂತರ ಕಿರುಕುಳ ನೀಡುತ್ತಿದ್ದರು. “ಹೆಣ್ಣುಮಗುವಿನ ಜನನದ ನಂತರ ಕಿರುಕುಳ ಇಮ್ಮಡಿಯಾಗಿ, ದೈಹಿಕ ಹಿಂಸೆ, ಜೀವ ಬೆದರಿಕೆ ಎದುರಿಸಬೇಕಾಯಿತು” ಎಂದು ದಿವ್ಯಾ ಹೇಳಿದ್ದಾರೆ. ಇದಲ್ಲದೆ, ತಮ್ಮ ಮಗಳನ್ನು ಉಜ್ಜಯಿನಿ ಜಿಲ್ಲೆಯ ನಾಗ್ಡಾ ಗ್ರಾಮದಲ್ಲಿ ದೇವೇಂದ್ರರ ಅತ್ತೆ-ಮಾವಂದಿರು ಬಲವಂತವಾಗಿ ಇರಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ರತ್ಲಾಂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್ ಅವರು ದೂರಿನ ಆಧಾರದಲ್ಲಿ ಭಾನುವಾರವೇ ಪ್ರಕರಣ ದಾಖಲಿಸಿ, ತನಿಖೆ ಆರಂಭಿಸಿದ್ದಾರೆ.