ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

Bಬೈಂದೂರು: ನಿಯಂತ್ರಣ ತಪ್ಪಿ ಬೈಕ್ ಪಲ್ಟಿ: ಯಕ್ಷಗಾನ ಕಲಾವಿದ ಮೊಳಹಳ್ಳಿ ಹೆರಿಯ ನಾಯಕ್ ಹಿರಿಯ ಪುತ್ರ ಪ್ರಭಾಕರ್ ಮೆಂಡನ್ ಮೃತ್ಯು

Bಬೈಂದೂರು: ನಿಯಂತ್ರಣ ತಪ್ಪಿ ಬೈಕ್ ಪಲ್ಟಿ: ಯಕ್ಷಗಾನ ಕಲಾವಿದ ಮೊಳಹಳ್ಳಿ ಹೆರಿಯ ನಾಯಕ್ ಹಿರಿಯ ಪುತ್ರ ಪ್ರಭಾಕರ್ ಮೆಂಡನ್ ಮೃತ್ಯು


ಬೈಂದೂರು | ಸವಾರನ ನಿಯಂತ್ರಣ ತಪ್ಪಿ ಬೈಕ್ ಪಲ್ಟಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿದ ದುರ್ಘಟನೆ ಬೈಂದೂರು ತಾಲೂಕಿನ ನಾಡಗುಡ್ಡೆಯಂಗಡಿಯ ಬೆಳ್ಳಾಡಿ ಪ್ರದೇಶದಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ.
ಮೃತರನ್ನು ಕೋಟ ಮಣೂರು ಪಡುಕರೆ ನಿವಾಸಿ ಪ್ರಭಾಕರ್ ಮೆಂಡನ್ ಎಂದು ಗುರುತಿಸಲಾಗಿದೆ.
ಅವರು ಭಾನುವಾರ ರಾತ್ರಿ ಮಣೂರು ಪಡುಕರೆ ಮನೆಯಿಂದ ತಮ್ಮ ಪತ್ನಿಯ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ, ನಾಡಗುಡ್ಡೆಯಂಗಡಿಯ ಬೆಳ್ಳಾಡಿ ಬಳಿ ಅವರ ಬೈಕ್ ಸ್ಕಿಡ್ ಆಗಿ ರಸ್ತೆಯಲ್ಲಿ ಪಲ್ಟಿಯಾಗಿ ಗಂಭೀರ ಗಾಯಗೊಂಡಿದ್ದರು ತಕ್ಷಣ ಸ್ಥಳೀಯರು ಗಂಗೊಳ್ಳಿ ಆಪತ್ಬಾಂಧವ ಆಂಬುಲೆನ್ಸ್ ಸೇವೆಯ ಇಬ್ರಾಹಿಂ ಗಂಗೊಳ್ಳಿ ಘಟನಾ ಸ್ಥಳಕ್ಕೆ ಆಗಮಿಸಿ. ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಪ್ರಥಮವಾಗಿ ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

 ಅಲ್ಲಿನ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಸಾಗಿಸುವ ವೇಳೆ, ದುರದೃಷ್ಟವಶಾತ್ ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಮೃತರ ಸಹೋದರ ನೀಡಿದ ದೂರಿನ ಆಧಾರದ ಮೇಲೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ 

ಮೃತ ಪ್ರಭಾಕರ್ ಮೆಂಡನ್ ಅವರು ಖ್ಯಾತ ಯಕ್ಷಗಾನ ಕಲಾವಿದ ದಿವಂಗತ ಮೊಳಹಳ್ಳಿ ಹೆರಿಯ ನಾಯಕ್ ಅವರ ಹಿರಿಯ ಪುತ್ರರಾಗಿದ್ದು, ಅವರ ಅಕಾಲಿಕ ನಿಧನದಿಂದ ಕುಟುಂಬದವರಲ್ಲಿ ಆಳವಾದ ಶೋಕದ ವಾತಾವರಣ ನಿರ್ಮಾಣವಾಗಿದೆ. ಮೃತರಿಗೆ ಒಬ್ಬ ಗಂಡು ಮತ್ತು ಒಬ್ಬ ಹೆಣ್ಣು ಮಗು ಇದ್ದು, ಪತ್ನಿ ಹಾಗೂ ಮಕ್ಕಳನ್ನು ಅಗಲಿದ್ದಾರೆ.

Ads on article

Advertise in articles 1

advertising articles 2

Advertise under the article