Gadaga : ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ BJP ಶಾಸಕ ಚಂದ್ರು ಲಮಾಣಿ….!
Saturday, February 21, 2026
ಗದಗ: ಗುತ್ತಿಗೆದಾರರನಿಂದ ಕಮಿಷನ್ ರೂಪದಲ್ಲಿ 5 ಲಕ್ಷ ರೂಪಾಯಿ ಹಣ ಪಡೆಯುತ್ತಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಗದಗ ಜಿಲ್ಲೆಯ ಲಕ್ಷ್ಮೀಶ್ವರ ಪಟ್ಟಣದಲ್ಲಿರುವ ಬಾಲಾಜಿ ಆಸ್ಪತ್ರೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು.
ಶಾಸಕ ಚಂದ್ರು ಲಮಾಣಿ ಸ್ವತಃ ವೈದ್ಯರು ಕೂಡ ಆಗಿದ್ದು ಬಾಲಾಜಿ ಆಸ್ಪತ್ರೆ ಚಂದ್ರು ಲಮಾಣಿ ಅವರ ಒಡೆತನ ಆಸ್ಪತ್ರೆಯಾಗಿದೆ.
ಲೋಕಾಯುಕ್ತ ಅಧಿಕಾರಿಗಳ ದಾಳಿ ವೇಳೆ ಶಾಸಕ ಚಂದ್ರು ಲಮಾಣಿ ಹಾಗೂ ಅವರ ಇಬ್ಬರು ಪಿಎಗಳಾದ ಮಂಜುನಾಥ್ ಹಾಗೂ ಗುರು ಸಹ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸದ್ಯ ಮೂವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಕಾಮಗಾರಿ ಯೋಚನೆಗಾಗಿ ಗುತ್ತಿಗೆದಾರನಿಂದ 11 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಡಲಾಗಿತ್ತು. ಅದರಂತೆ ಮುಂಗಡವಾಗಿ 5 ಲಕ್ಷ ರೂಪಾಯಿ ಕಮಿಷನ್ ಪಡೆಯುವಾಗ ಶಾಸಕರು ಸಿಕ್ಕಿಬಿದ್ದಿದ್ದಾರೆ
ತನಿಖೆ ಮುಂದುವರೆದಿದೆ, ಶಾಸಕರ ಇಂತಹ ನಡೆಗೆ ಬಿಜೆಪಿ ಪಕ್ಷಕ್ಕೆ ಮುಜುಗರ ತಂದಿದ್ದಾರೆ, ಶಾಸಕರ ವಿರುದ್ಧ ಬಿಜೆಪಿ ಕಾರ್ಯಕರ್ತರು ಹಾಗೂ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದರು