ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

Udupi: ತಪಾಸಣಾಧಿಕಾರಿ ಬಾಬು ಅವರ ಸಮಯಪ್ರಜ್ಞೆಯಿಂದ ಚಲಿಸುತ್ತಿದ್ದ ರೈಲಿನಿಂದ ಹೊರ ಜಿಗಿಯಲು ಯತ್ನಿಸಿದ ಯುವಕ - ರಕ್ಷಣೆ

Udupi: ತಪಾಸಣಾಧಿಕಾರಿ ಬಾಬು ಅವರ ಸಮಯಪ್ರಜ್ಞೆಯಿಂದ ಚಲಿಸುತ್ತಿದ್ದ ರೈಲಿನಿಂದ ಹೊರ ಜಿಗಿಯಲು ಯತ್ನಿಸಿದ ಯುವಕ - ರಕ್ಷಣೆ

ಉಡುಪಿ: ಟಿಕೆಟ್ ರಹಿತವಾಗಿ ಪ್ರಯಾಣಿಸುತ್ತಿದ್ದ ಯುವಕನೊಬ್ಬ ಚಲಿಸುತ್ತಿದ್ದ ರೈಲಿನ ಬಾಗಿಲಿನಿಂದ ಹೊರ ಜಿಗಿಯಲು ಯತ್ನಿಸುತ್ತಿದ್ದಾಗ, ಕರ್ತವ್ಯ ನಿರ್ವಸುತ್ತಿದ್ದ ತಪಾಸಣಾಧಿಕಾರಿ ಬಾಬು ಅವರ ಸಮಯಪ್ರಜ್ಞೆಯಿಂದ, ರಕ್ಷಿಸಲ್ಪಿಟ್ಟಿರುವ ಘಟನೆ ಇನ್ನಂಜೆಯಲ್ಲಿ ನಡೆದಿದೆ. ಕೇರಳದಿಂದ ಮುಂಬೈಗೆ ತೆರಳುತ್ತಿದ್ದ ರೈಲು, ಇನ್ನಂಜೆ ರೈಲು ನಿಲ್ದಾಣದ ಸಮೀಪ ಬಂದಾಗ ಘಟನೆ ನಡೆದಿದೆ. ಬಳಿಕ ಬಾಬು ಅವರು, ರಕ್ಷಿಸಿದ್ದ ಯುವಕನನ್ನು ಇಂದ್ರಾಳಿಯ ಆರ್ ಪಿ ಎಫ್ ಕಛೇರಿ ವಶಕ್ಕೆ ಒಪ್ಪಿಸಿದರು. ಯುವಕ ಮನೋರೋಗಿ ಎಂದು ತಿಳಿದು ಬಂದಿರುವುದರಿಂದ ರೈಲ್ವೆ ಪೋಲಿಸರು ಸಮಾಜಸೇವಕ ನಿತ್ಯಾನಂದ‌ ಒಳಕಾಡು ಅವರ ನೆರವು ಪಡೆದು, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸುವ ವ್ಯವಸ್ಥೆಗೊಳಿಸಿದರು. ಆಸ್ಪತ್ರೆ ದಾಖಲು ಪ್ರಕ್ರಿಯೆ ನಡೆಸುವಾಗ ಹೆಸರು ಸಹಾದ್ (25) ಕೊಯಿಕೊಡ್ ನಿವಾಸಿ ಎಂದಷ್ಟೆ ಹೇಳಿಕೊಂಡಿದ್ದಾನೆ. ಕಾರ್ಯಾಚರಣೆಯಲ್ಲಿ ಟಿ.ಸಿ ಸುನೀಲ್, ಆರ್.ಪಿ.ಎಫ್ ರವಿಪ್ರಕಾಶ್, ಜೀನ ಪಿಂಟೋ ಭಾಗಿಯಾಗಿದ್ದರು.

Ads on article

Advertise in articles 1

advertising articles 2

Advertise under the article