Bhatkal ಭಟ್ಕಳದ ಸಂಶನೂರು ಆಸ್ಪತ್ರೆಯಲ್ಲಿ ಹೊಟ್ಟೆ ನೋವಿಗೆ ಚಿಕಿತ್ಸೆ ಪಡೆದ ಮುರುಡೇಶ್ವರ ಸಮೀಪದ ಮಹಿಳೆ ಅನುಮಾನಾಸ್ಪದ ಸಾವು..!
Sunday, April 19, 2026
ಭಟ್ಕಳ: ಮುರುಡೇಶ್ವರ ಸಮೀಪದ ಮುಡಶಿರಾಲಿ ಗ್ರಾಮದ 42 ವರ್ಷದ ಮಹಿಳೆ ಮಾಲತಿ ನಾಗರಾಜ ನಾಯ್ಕ ಅವರು ಹೊಟ್ಟೆನೋವಿನಿಂದಾಗಿ ಮೃತಪಟ್ಟ ಘಟನೆ ನಡೆದಿದೆ.
ಏಪ್ರಿಲ್ 16ರಂದು ಮಾಲತಿ ಅವರಿಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದು, ಆ ದಿನ ಮನೆಯಲ್ಲೇ ವಿಶ್ರಾಂತಿ ಪಡೆದಿದ್ದರು. ಆದರೆ ನೋವು ಕಡಿಮೆಯಾಗದ ಹಿನ್ನೆಲೆಯಲ್ಲಿ ಏಪ್ರಿಲ್ 17ರಂದು ಅವರನ್ನು ಭಟ್ಕಳದ ಸಂಶನೂರು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ, ಹೆಚ್ಚಿನ ಚಿಕಿತ್ಸೆಗೆ ಉಡುಪಿ ಕಡೆಗೆ ಕರೆದೊಯ್ಯಲಾಗುತ್ತಿತ್ತು.
ಈ ವೇಳೆ ದಾರಿ ಮಧ್ಯೆಯೇ ಮಾಲತಿ ಅವರು ಉಸಿರು ನಿಲ್ಲಿಸಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಮೃತೆಯ ಪತಿ ನಾಗರಾಜ ನಾಯ್ಕ ಮಾಹಿತಿ ನೀಡಿದ್ದು, ಮುರುಡೇಶ್ವರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.