ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

Bengaluru ತಿಪಟೂರು ಶಾಸಕ ಕೆ. ಷಡಕ್ಷರಿ ದೆಹಲಿಯಲ್ಲಿ ಆಸ್ಪತ್ರೆಗೆ ದಾಖಲು; ಆರೋಗ್ಯ ‌ಸ್ಥಿತಿ ಗಂಭೀರ

Bengaluru ತಿಪಟೂರು ಶಾಸಕ ಕೆ. ಷಡಕ್ಷರಿ ದೆಹಲಿಯಲ್ಲಿ ಆಸ್ಪತ್ರೆಗೆ ದಾಖಲು; ಆರೋಗ್ಯ ‌ಸ್ಥಿತಿ ಗಂಭೀರ

ತಿಪಟೂರು ಕಾಂಗ್ರೆಸ್ ಶಾಸಕರಾದ ಕೆ. ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಸುದ್ದಿ ಒರಬಂದಿದೆ. ಈ ಸುದ್ದಿ ತಿಪಟೂರು ಮತ್ತು ರಾಜ್ಯದ ರಾಜಕೀಯ ವಲಯದಲ್ಲಿ ಆತಂಕ ಮೂಡಿಸಿದೆ. 
ನವದೆಹಲಿಯಲ್ಲಿ ಇದ್ದಾಗ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿ, ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.
ಶಾಸಕರ ಆರೋಗ್ಯ ‌ಸ್ಥಿತಿ ಗಂಭೀರವಾಗಿದೆ, ಆಸ್ಪತ್ರೆಯಲ್ಲಿ ಡಿಸಿಎಂ ಪರಮೇಶ್ವರ್, ಎಂಎಲ್‌ಸಿ ರಾಜೇಂದ್ರ ರಾಜಣ್ಣ ಇದ್ದಾರೆ. ಇಬ್ಬರ ಉಪಸ್ಥಿತಿಯಲ್ಲಿ ಷಡಕ್ಷರಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ.
ದೆಹಲಿಯ ಕರ್ನಾಟಕ ಭವನದಲ್ಲಿ ಉಳಿದುಕೊಂಡಿದ್ದ ಶಾಸಕ ಷಡಕ್ಷರಿ, ಇಂದು ಬೆಳಗ್ಗೆ ಡಿಸಿಎಂ ಪರಮೇಶ್ವರ್ ಕೋಣೆಗೆ ಬಂದು ಮಾತಾಡಲು ತೊಂದರೆಯಾಗುತ್ತಿದೆ ಎಂದು ಸನ್ನೆ ಮಾಡಿ ಹೇಳಿದ್ದಾರೆ. 
ಕೂಡಲೇ ಪರಮೇಶ್ವರ್ ಅವರು ಕರ್ನಾಟಕ ಭವನದ ಸಿಬ್ಬಂದಿ ಸಹಾಯದೊಂದಿಗೆ ಶಾಸಕರನ್ನು ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. 

Ads on article

Advertise in articles 1

advertising articles 2

Advertise under the article