COSTALNEWS | BIG BREAKING ಕರಾವಳಿ ಭಾಗದಲ್ಲಿ ಅಪಾರ ಜನಮನ್ನಣೆ ಗಳಿಸಿರುವ ದಸ್ತಗಿರಿ ಸಾಹೇಬ್ ಕಂಡ್ಲೂರು
Tuesday, July 21, 2026
ಕುಂದಾಪುರ:
ಸಮಾಜ ಸೇವೆ, ಧಾರ್ಮಿಕ ಚಟುವಟಿಕೆಗಳು ಹಾಗೂ ಜನಪರ ಕಾರ್ಯಗಳ ಮೂಲಕ ಕರಾವಳಿ ಭಾಗದಲ್ಲಿ ಅಪಾರ ಜನಮನ್ನಣೆ ಗಳಿಸಿರುವ ದಸ್ತಗಿರಿ ಸಾಹೇಬ್ ಕಂಡ್ಲೂರು ಅವರು ಸಮಾಜಮುಖಿ ನಾಯಕತ್ವದ ಮೂಲಕ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ.
ಸಂಕಷ್ಟದ ಸಂದರ್ಭಗಳಲ್ಲಿ ಜನರ ನೆರವಿಗೆ ಧಾವಿಸುವ ಆಪ್ತ ರಕ್ಷಕರಾಗಿ ಗುರುತಿಸಿಕೊಂಡಿರುವ ಅವರು, ಧಾರ್ಮಿಕ ಸೌಹಾರ್ದತೆ, ಸೇವಾ ಮನೋಭಾವ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಕರಾವಳಿ ಭಾಗದ ಅಭಿವೃದ್ಧಿ ಹಾಗೂ ಸಮಾಜದ ಒಳಿತಿಗಾಗಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಅವರಿಗೆ "ಕರಾವಳಿ ರತ್ನ" ಜೊತೆಯಲ್ಲಿ "ಕನ್ನಡ ಸರ್ವಭಾಮ ಪ್ರಶಸ್ತಿ" ನೀಡಿ ಸನ್ಮಾನಿಸಲಾಗಿದೆ.
ಅವರ ಸಾಧನೆ ಹಾಗೂ ಸಮಾಜಮುಖಿ ಸೇವೆಗೆ ಸಾರ್ವಜನಿಕರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಗಣ್ಯರು ಅಭಿನಂದನೆ ಸಲ್ಲಿಸಿದ್ದು, ಮುಂದೆಯೂ ಇದೇ ರೀತಿಯ ಸೇವಾ ಕಾರ್ಯಗಳನ್ನು ಮುಂದುವರಿಸಲಿ ಎಂದು ಶುಭ ಹಾರೈಸಿದ್ದಾರೆ.